LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ತೇಜಸ್ವಿ ಸೂರ್ಯ ಒಬ್ಬ ವೇಸ್ಟ್ ಮೆಟೀರಿಯಲ್ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಇನ್ನೂ ಎಳಸು. ಆತನಿಗೆ ಅನುಭವ ಕಡಿಮೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸುರಂರ ರಸ್ತೆ ನಿರ್ಮಾಣ ವಿಚಾರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇರ‍್ಟಿಯಾಗಿ ಸಮಾಲೋಚನೆ ನಡೆಸಿದ್ದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ತೇಜಸ್ವಿ ಸೂರ್ಯ ಒಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತನಾಡಿದರೆ ಬಾಯಿಗೆ ಬಂದಂತೆ ಒದರುತ್ತಿದ್ದಾನೆ ಎಂದು ಕಿಡಿಕಾರ್ದರು.

ಟನಲ್ ರಸ್ತೆ ಬೇಡ ಎನ್ನಲು ತೇಜಸ್ವಿ ಸೂರ್ಯ ಯಾರು? ಇಡೀ ದೇಶ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳು ಬೇಡ ಎಂದು ಆತ ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನಿಸಲಿ. ಸಂಸದ ತೇಜಸ್ವಿ ಸೂರ್ಯಗೆ ಪ್ರಪಂಚ ಹೇಗಿದೆ ಎಂಬುದೇ ಇನ್ನೂ ಗೊತ್ತಿಲ್ಲ ಎಂದರು.

ಹುಡುಗರ ಬಳಿ ಕಾರಿಲ್ಲದಿದ್ದರೆ ಹೆಣ್ಣು ಕೊಡುವುದಿಲ್ಲ ಎಂದು ನಾನು ಹೇಳಿದ್ದೆ. ಅದನ್ನೇ ಹಿಡಿದುಕೊಂಡಿದ್ದಾನೆ. ಆತನ್ಯಾಕೆ ಕಾರಿನಲ್ಲಿ ಓಡಾತ್ತಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೀ, ಸರ್ಕಾರಿ ಬಸ್ ಗಳಲ್ಲಿ ಓಡಾಡಲಿ, ಬೇಡ ಎಂದವರು ಯಾರು? ಇವರಿಗೇಕೆ ಕಾರುಗಳು ಬೇಕು? ಬೆಂಗಳೂರಿನಲ್ಲಿ 1.30ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ತೇಜಸ್ವಿ ಮೊದಲು ಅರ್ಥಮಾಡಿಕೊಳ್ಳಬೇಕು. ಅವರಿಗೆಲ್ಲ ವಾಹನ ಬಳಸಬೇಡಿ ಎನ್ನಲು ಆಗುತ್ತಾ? ಆತ ಮೊದಲು ಕಾರಿನಲ್ಲಿ ಓಡಾಡುವುದನ್ನು ನಿಲ್ಲಿಸಲಿ ಎಂದು ಗುಡುಗಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ