LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕ ಸಾವು 

Advertisement
ಹಾಸನ: ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕೇರಳಾಪುರ ಗ್ರಾಮದ ನಿವಾಸಿ ಸತೀಶ್ (53) ಮೃತಪಟ್ಟ ದುರ್ದೈವಿ ಶಿಕ್ಷಕರು.ಇವರು ಕೆಬ್ಬೆಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಇವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ.

ಕ್ಷಣಾರ್ಧದಲ್ಲೇ ತೀವ್ರ ಅಸ್ವಸ್ಥಗೊಂಡ ಸತೀಶ್ ಅವರು ತರಗತಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ಆತಂಕಕ್ಕೊಳಗಾದ ವಿದ್ಯಾರ್ಥಿಗಳು ಕೂಡಲೇ ಇತರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು:

ಸಹೋದ್ಯೋಗಿ ಶಿಕ್ಷಕರು ಕೂಡಲೇ ಆಂಬುಲೆನ್ಸ್‌ ಗೆ ಕರೆ ಮಾಡಿ ಸತೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿದಾಗ ಅವರು ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ