LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Feature Article

ಯಶೋದಾ ಮತ್ತು ಕೃಷ್ಣ ಎಂಬ ತೈಲಚಿತ್ರ ಬರೋಬ್ಬರಿ 167.2 ಕೋಟಿ ರೂ.ಗೆ ಮಾರಾಟ

Advertisement
ನವದೆಹಲಿ: ಖ್ಯಾತ ಚಿತ್ರಕಲಾವಿದ ರಾಜಾ ರವಿವರ್ಮ ಅವರ ಕುಂಚದಲ್ಲಿ ಅರಳಿದ ಅಮೂಲ್ಯ ಕಲಾಕೃತಿಯೊಂದುಈಗ ವಿಶ್ವಮಟ್ಟದಲ್ಲಿ ಹೊಸ ದಾಖಲೆ ಬರೆದಿದೆ.

ಮುಂಬೈನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಅವರ 'ಯಶೋದಾ ಮತ್ತು ಕೃಷ್ಣ ಎಂಬ ತೈಲಚಿತ್ರ ಬರೋಬ್ಬರಿ 167.2 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಭಾರತೀಯ ಕಲಾ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ಭಾರತೀಯ ಕಲಾ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತಕ್ಕೆ ಹರಾಜಾದ ಅತ್ಯಂತ ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಕಲಾಕೃತಿ ಪಾತ್ರವಾಗಿದೆ. ಸಫ್ರಾನ್ ಆರ್ಟ್ ಸಂಸ್ಥೆಯು ಆಯೋಜಿಸಿದ್ದ ಈ ಹರಾಜಿನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಅಂತಿಮವಾಗಿ ಪ್ರಸಿದ್ಧ ಉದ್ಯಮಿ ಹಾಗೂ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್ ಪೂನಾವಾಲಾ ಅವರು ಈ ಅದ್ಭುತ ಚಿತ್ರವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಖರೀದಿಸಿದ ಬಳಿಕ ಸೈರಸ್ ಪೂನಾವಾಲಾ ಅವರು ಮಾಹಿತಿ ಹಂಚಿಕೊಂಡಿದ್ದು, ಇದನ್ನು ಖರೀದಿಸುವುದು ಹಕ್ಕು ಹಾಗೂ ಒಂದು ಜವಾಬ್ದಾರಿಯೂ ಹೌದು. ಇದು ಕೇವಲಕ್ಕೆ ಚಿತ್ರಕಲೆಯಲ್ಲ. ರಾಷ್ಟ್ರೀಯ ಸಂಪತ್ತು. ಹಾಗಾಗಿ ಸಾರ್ವಜನಿಕ ವೀಕ್ಷಣೆಗೆ ಇದು ಲಭ್ಯವಾಗಬೇಕು. ಜನರಿಗೆ ನೋಡಲು ಸಿಗುವಂತೆ ನನ್ನ ಕೈಲಾದಷ್ಟು ನಾನು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

1848ರಲ್ಲಿ ತಿರುವಾಂಕೂರು ರಾಜಪ್ರಭುತ್ವದ ಶ್ರೀಮಂತ ಕುಟುಂಬದಲ್ಲಿ ರಾಜ ರವಿವರ್ಮ ಜನಿಸಿದರು. ಯುರೋಪಿಯನ್ ತೈಲವನ್ನು ಬಳಸಿ ವರ್ಣಚಿತ್ರಗಳನ್ನು ರಚಿಸುತ್ತಿದ್ದರು. ಭಾರತೀಯ ಚಿತ್ರಕಲೆಗೆ ಆಧುನಿಕ ಸ್ಪರ್ಶ ನೀಡಿದ ರಾಜಾ ರವಿವರ್ಮ ಅವರು, ಪುರಾಣದ ಕಥೆಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸುತ್ತಿದ್ದರು.

1890ರ ದಶಕದಲ್ಲಿ ರಚಿಸಿದ ಈ ಕಲಾಕೃತಿಯಲ್ಲಿ ತಾಯಿ ಯಶೋದೆಯು ಬಾಲಕೃಷ್ಣನನ್ನು ಪ್ರೀತಿಯಿಂದ ಅಪ್ಪಿಕೊಂಡಿರುವ ದೃಶ್ಯವು ಅತ್ಯಂತ ಮನಮೋಹಕವಾಗಿ ಮೂಡಿಬಂದಿದೆ. ಮಾನವೀಯ ಸಂಬಂಧಗಳು ಮತ್ತು ದೈವಿಕತೆಯನ್ನು ಮೇಳೈಸಿದ ಈ ಚಿತ್ರವು ದಶಕಗಳಿಂದ ಕಲಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದು ಕೇವಲ ಒಂದು ಚಿತ್ರವಾಗಿರದೆ, ಭಾರತೀಯ ಪರಂಪರೆಯನ್ನು ಎತ್ತಿ ಹಿಡಿಯುವ ಇಂತಹ ಕಲಾಕೃತಿಗಳು ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಕೋಟಿ ಕೋಟಿ ಬೆಲೆ ಪಡೆಯುತ್ತಿರುವುದು ನಮ್ಮ ದೇಶದ ಕಲೆಗೆ ಸಿಕ್ಕ ದೊಡ್ಡ ಗೌರವವಾಗಿದೆ. ಈ ಹಿಂದೆ ಕೂಡ ಅನೇಕ ಚಿತ್ರಗಳು ದಾಖಲೆ ಬೆಲೆಗೆ ಮಾರಾಟವಾಗಿದ್ದರೂ, ರವಿವರ್ಮ ಅವರ ಈ ಕೃತಿ ಆ ಎಲ್ಲಾ ಹಳೆಯ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು, ಫಾರ್ಮ್-9 ಮತ್ತು ಫಾರ್ಮ್-11 ವಿತರಣೆಯಲ್ಲಿ ಸಾರ್ವಜನಿಕ  ಆಕ್ರೋಶ ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ : ಸಂತೋಷ ಲಾಡ್ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು