LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮುದಾಯವಾರು ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ : ಸಿದ್ದರಾಮಯ್ಯ 

Advertisement

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನ ಬಿಡುಗಡೆಯಲ್ಲಿ ಯಾವುದೇ ರೀತಿಯ ಉದ್ದೇಶಪೂರ್ವಕ ತಾರತಮ್ಯ ಎಸಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. 

ಇಲಾಖೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿದ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಆ ಸಮುದಾಯಕ್ಕೆ ಹೆಚ್ಚು ಅನುದಾನ ಸಂದಾಯವಾಗಿದೆಯೇ ಹೊರತು, ಇದರ ಹಿಂದೆ ಯಾವುದೇ ಪಕ್ಷಪಾತ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ನೀಡಿರುವ ಮನವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ. 

ಸದ್ಯ ಸುಮಾರು 155 ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಗೆ ಒಟ್ಟು 71.85 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಪೂರ್ವಭಾವಿ ಮಂಜೂರಾತಿಯನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST