LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ 

Advertisement
ಬೆಳಗಾವಿ: ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಸೇತುವೆ ಬಳಿ ಬುಧವಾರ, ಮಲಪ್ರಭಾ ನದಿ ನೀರಿನಲ್ಲಿ ಮೂರು ಬೈಕುಗಳು ‍ಪತ್ತೆಯಾಗಿವೆ. ಇವುಗಳನ್ನು ಕದ್ದು, ಚಿನ್ನದಂಗಡಿ ದರೋಡೆಗೆ ಬಳಸಿ, ಸಾಕ್ಷ್ಯ ನಾಶಕ್ಕೆ ನದಿಗೆ ಬಿಸಾಕಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

KA25 G-1459, KA24 J-7907 ಎಂಬ ಸಂಖ್ಯೆಯ ಎರಡು ಬೈಕ್‌ ಹಾಗೂ ನಂಬರ್‌ ಪ್ಲೇಟ್‌ ಇಲ್ಲದ ಇನ್ನೊಂದು ಬೈಕ್‌ ಪತ್ತೆಯಾಗಿದೆ.

ಬುಧವಾರ ನದಿ ಸೇತುವೆ ಮೇಲೆ ಹೊರಟವರಿಗೆ ಇವು ಕಂಡಿವೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಅವುಗಳನ್ನು ಹೊರಕ್ಕೆ ತಂದರು.

ಸವದತ್ತಿ ಪಟ್ಟಣದಲ್ಲಿ 2025ರ ಡಿಸೆಂಬರ್‌ 22ರಂದು ಚಿನ್ನದ ಅಂಗಡಿ ದರೋಡೆ ಮಾಡಲಾಗಿತ್ತು. ₹12 ಲಕ್ಷ ಮೌಲ್ಯದ ಚಿನ್ನಾಭರಣ ಕದಿಯಲಾಗಿತ್ತು..

ಮೂರು ಬೈಕುಗಳ ಮೇಲೆ ಬಂದಿದ್ದ 9 ಆರೋಪಿಗಳು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಬಹುಶಃ ಈ ಮೂರೂ ಬೈಕುಗಳನ್ನು ಕದ್ದು, ಚಿನ್ನಾಭರಣ ದರೋಡೆಗೆ ಬಳಸಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಮಲಪ್ರಭಾ ನದಿಯಲ್ಲಿ ಎಸೆದು ಹೋದ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ