LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಸ್ಕಾನ್ ಸಹಿತ ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

Advertisement
ಹುಬ್ಬಳ್ಳಿ : ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಬೆಳಗಿನ ಜಾವದಿಂದಲೇ ವಿವಿಧ ದೇಗುಲಗಳಲ್ಲಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ.

ಹುಬ್ಬಳ್ಳಿ–ಧಾರವಾಡದ ಮಧ್ಯದಲ್ಲಿರುವ ರಾಯಾಪುರದ ಇಸ್ಕಾನ್ ಮಂದಿರದಲ್ಲಿ ಭಕ್ತಿಭಾವ ಮತ್ತು ಆಧ್ಯಾತ್ಮಿಕ ಉತ್ಸಾಹದಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಿಗ್ಗೆ ೮:೦೦ ಗಂಟೆಗೆ ಭಕ್ತರ ದರ್ಶನಕ್ಕಾಗಿ ದೇವಾಲಯವನ್ನು ತೆರೆಯಲಾಗಿದ್ದು, ೮:೩೦ ಗಂಟೆಗೆ ಪವಿತ್ರ ವೈಕುಂಠ ದ್ವಾರವನ್ನು ವಿಧಿವಿಧಾನಪೂರ್ವಕವಾಗಿ ತೆರೆಯಲಾಯಿತು. ಈ ಮೂಲಕ ಸಾವಿರಾರು ಭಕ್ತರು ದ್ವಾರವನ್ನು ದಾಟಿ ಶ್ರೀ ಶ್ರೀ ಗರುಡ ಸೇವಾ ಶ್ರೀ ಶ್ರೀ ಲಕ್ಷ್ಮೀ ನಾರಾಯಣರ ವಿಶೇಷ ಕೃಪೆಯನ್ನು ಪಡೆದರು.

ದೇವಾಲಯದ ವಾತಾವರಣ ಸಂಪೂರ್ಣವಾಗಿ ಆಧ್ಯಾತ್ಮಿಕ ಶಕ್ತಿಯಿಂದ ತುಂಬಿಕೊAಡಿತ್ತು. ಸಂಜೆ ೫:೦೦ ಗಂಟೆಗೆ ಶಾಂತಿ, ಸಮೃದ್ಧಿ ಮತ್ತು ಆತ್ಮೋನ್ನತಿಗಾಗಿ ಶ್ರೀ ವೆಂಕಟೇಶ್ವರ ಹೋಮವನ್ನು ವಿಧಿವಿಧಾನಪೂರ್ವಕವಾಗಿ ನೆರವೇರಿಸಲಾಯಿತು.
ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜನಸಾಗರವೇ ನೆರೆದಿದ್ದು ಬೆಂಗಳೂರಿನ ಪ್ರಸಿದ್ಧ ದೇಗುಲ ಇಸ್ಕಾನ್, ವೈಯಾಲಿಕಾವಲ್ ಟಿಟಿಡಿ ಹುಬ್ಬಳ್ಳಿಯ ರಾಯಾಪುರದ ಇಸ್ಕಾನ್ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದಿವೆ.

ಧಾರವಾಡದಲ್ಲಿ ವೈಕುಂಠ ಏಕಾದಶಿ: ಮಂಗಳವಾರ ವೈಕುಂಠ ಏಕಾದಶಿ ಪ್ರಯುಕ್ತ. ಶ್ರೀಹರಿ ಸೇವೆಯಲ್ಲಿ ವರ್ಷದ ಪರ್ಯಾಯ ಅರ್ಚಕರಾದಸತ್ಯನಾರಾಯಣ ವೆಂಕಟೇಶ್ ಅವರ ನೇತೃತ್ವದಲ್ಲಿ ಶ್ರೀ ಮಹಾಲಕ್ಷ್ಮಿ- ವೆಂಕಟೇಶ್ವರ ದೇವಸ್ಥಾನ ಮಣಕಿಲ್ಲಾ, ಧಾರವಾಡದಲ್ಲಿ ವಿಷ್ಣು ಸಹಸ್ರನಾಮ ಪಟಿಸಿ, ಒಂದು ಲಕ್ಷ ತುಳಸಿ ಅರ್ಚನೆಯನ್ನು ಮತ್ತು ಸದ್ಬಕ್ತರಿಗೆ ಉತ್ತರಾಭಿಮುಖದ ವೈಕುಂಠದ ದ್ವಾರವನ್ನು ನಿರ್ಮಿಸಿ, ಶ್ರೀದೇವರ ದರ್ಶನಕ್ಕೆ ಅನುಕೂಲ ಮಾಡಲಾಗಿತ್ತು.

ವರದಿ : ಸುಧೀರ್ ಕುಲಕರ್ಣಿ ‌
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ