LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಡಳಿತ ಅಧಿಕಾರಿ ನೇಮಕ ಆದೇಶ ಹಿಂಪಡೆಯಿರಿ:ವೀರಪ್ಪ ಧೂಮ್ಮನಸೂರ್ ಒತ್ತಾಯ

Advertisement
ಹುಮನಾಬಾದ : ಗ್ರಾಮ ಪಂಚಾಯತಿಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೋರಡಿಸಿರುವ ಸರಕಾರದ ಆದೇಶ ಈ ಕೂಡಲೇ ಹಿಂಪಡೆಯಬೇಕು ಎಂದು ಧೂಮ್ಮನಸೂರ್ ಗ್ರಾಮ ಪಂಚಾಯತ ಅಧ್ಯಕ್ಷ ವೀರಪ್ಪ ಧೂಮ್ಮನಸೂರ್ ಆಗ್ರಹಿಸಿದ್ದಾರೆ.

ಹುಮನಾಬಾದ ಪಟ್ಟಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು,ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ. ಆದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧವಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿಗಳ ಈಗಿರುವ ಆಡಳಿತ ಸಮಿತಿಯ ಅವಧಿ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಕೂಡ ಬರೆಯಲಾಗುತ್ತದೆ.

ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿ ಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶ ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿರುವ ಈಗಿರುವ ಆಡಳಿತ ಸಮಿತಿಗೆ ಮುಂದಿನ ಚುನಾವಣೆವರೆಗೆ ಪುನರ್ ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ವರದಿ  : ಸಜೀಶ್ ಲಂಬುನೋರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ