LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ವಿಶ್ವಾಸ ಮತಯಾಚನೆಯಲ್ಲಿ ವಿಜಯ್ ಯಶಸ್ವಿ : 144 ಶಾಸಕರ ಬೆಂಬಲ 

Advertisement

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಇದೀಗ ಅಗ್ನಿಪರೀಕ್ಷೆ ಎದುರಾಗಿದತ್ತು. ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ವಿಶ್ವಾಸಮತಯಾಚನೇ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 

ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತಯಾಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಒಟ್ಟು 144 ಶಾಸಕರು ಬೆಂಬಲ ನೀಡಿದ್ದು ವಿಧಾನಸಭೆಯಲ್ಲಿ ವಿಶ್ವಾಸ ಮಥವನ್ನು ಇದೀಗ ಮುಖ್ಯಮಂತ್ರಿ ವಿಜಯ್ ಗೆದ್ದಿದ್ದಾರೆ.

ಈಗಾಗಲೇ ವಿಜಯ್ ಸರ್ಕಾರಕ್ಕೆ ತಮ್ಮ ಪಕ್ಷದ ಐವರು ಶಾಸಕರಿಂದ ಸಂಪೂರ್ಣ ಬೆಂಬಲ ಇದೆ ಎಂದು ಸದನದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿತು.

 ಇನ್ನು ಸಿಪಿಐ ಪಕ್ಷದ ಇಬ್ಬರು ಶಾಸಕರು ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದರು. ತಮಿಳುನಾಡು ವಿಧಾನಸಭೆಯಲ್ಲಿ ಒಟ್ಟು ಸದಸ್ಯರ ಬಲ 232 ಇದು ವಿಜಯ್ ಬಹುಮತ ಸಾಬೀತಿಗೆ 117 ಶಾಸಕರ ಬಲ ಬೇಕು.

 ಸಿಪಿಐ 2, ಸಿಪಿಐ(ಎಂ) 2, ಟಿವಿಕೆ ಸರ್ಕಾರದ ಪರ ಮತಯಾಚನೆ ಮಾಡಿದ್ದು, ಡಿಎಂಕೆ ಪಕ್ಷದ ಓರ್ವ ಶಾಸಕರು ಟಿವಿಕೆ ಗೆ ಬೆಂಬಲ ಸೂಚಿಸಿದ್ದಾರೆ. ಇನ್ನು ಪಿಎಂಕೆ ಪಕ್ಷದ 4 ಶಾಸಕರು ಟಿವಿಕೆಗೆ ಬೆಂಬಲ ನೀಡಿದ್ದು ನಿರೀಕ್ಷೆಗೂ ಮೀರಿ ಬೆಂಬಲ ಸಿಕ್ಕಿದೆ.

ಇದೆ ಸಂದರ್ಭದಲ್ಲಿ ಡಿಎಂಕೆ ಶಾಸಕರಿಂದ ಸಭಾತ್ಯಾಗ ಮಾಡಿದ ಘಟನೆ ಕೂಡ ನಡೆಯಿತು. ವಿಶ್ವಾಸಮತ ಯಾಚನೆ ನಡುವೆ ಡಿಎಂಕೆ ಸಭಾತ್ಯಾಗ ಮಾಡಿತು.

ಟಿವಿಕೆಗೆ ಬೆಂಬಲ ನೀಡಿದವರಿಗೆ ಮುಖ್ಯಮಂತ್ರಿ ವಿಜಯ್ ಧನ್ಯವಾದ ತಿಳಿಸಿದರು. ನಾನು ತಮಿಳುನಾಡಿಗಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್, ವಿಸಿಕೆ, ಮುಸ್ಲಿಂ ಲೀಗ್ ಹಾಗೂ ಎಡ ಪಕ್ಷಗಳಿಗೆ ಮುಖ್ಯಮಂತ್ರಿ ವಿಜಯ್ ಧನ್ಯಾವಾದ ತಿಳಿಸಿದರು. 

ದ್ವೇಷದ ರಾಜಕಾರಣ ಮಾಡುವುದಿಲ್ಲ. ನಮ್ಮ ವಿರೋಧಿಗಳನ್ನು ಅಭಿವೃದ್ಧಿಯ ಭಾಗವಾಗಿಸಿಕೊಳ್ಳುತ್ತೇವೆ. ಇಂದಿನ ಸರ್ಕಾರದ ಯೋಜನೆಗಳು ಮುಂದುವರೆಯಲಿವೆ. ನಮ್ಮ ಸರ್ಕಾರ ಕುದುರೆ ವ್ಯಾಪಾರದಲ್ಲಿ ತೊಡಗುವುದಿಲ್ಲ ಎಂದು ವಿಜಯ್ ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ