Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ : ಸಿಎಂ 

Advertisement
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು