LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ದಕ್ಷಿಣ ಬಾಗಿಲು ಪ್ರವೇಶ ಈಗಲೂ ಕಠಿಣವಾಗುತ್ತಿದೇಯೇ ಬಿಜೆಪಿಗೆ?

Advertisement


ಮೇ. ೪ ೨೦೨೬ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪಾಲಿಗೆ ಅಮೃತ ಘಳಿಗೆಯ ಸಮಯ. ನಿರಂತರ ೧೫ ವರ್ಷಗಳ ಕಾಲ ಅಧಿಕಾರ ನಡೆಸಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವನ್ನು ಕಿತ್ತೊಗೆದು ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಆರಂಭಿಸಿತು.
ಈ ಮಹತ್ತರ ಸಾಧನೆಯೊಂದಿಗೆ ಬಿಜೆಪಿ ಅಧಿಕಾರ ಹೊಂದಿದ ರಾಜ್ಯಗಳ ಪಟ್ಟಿ ಬೆಳೆಯಿತು. ಇದೀಗ ೨೨ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ಇಷ್ಟೇಲ್ಲ ಸಾಧನೆ ಮಾಡಿದರೂ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಇನ್ನು ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿಲ್ಲ ಎಂಬ ಕೊರಗು ಆ ಪಕ್ಷಕ್ಕೆ ಇದೆ.
ತಮಿಳು ನಾಡು, ಕೇರಳ, ಆಂದ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿಗೆ ಪಕ್ಷ ಬೆಳೆಸಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿಯೂ ಅಧಿಕಾರ ನಡೆಸಿದೆಯಾದರೂ ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಈ ವರೆಗೆ ಅಧಿಕಾರ ಬಂದಿಲ್ಲ.
ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ತಾನ್, ಛತ್ತಿಸಗಢ, ಹರಿಯಾಣ, ಆಸ್ಸಾಮ, ಗುಜರಾತ್, ದೆಹಲಿ, ಮೇಘಾಲಯ, ಮಣಿಪುರ, ಜಾರ್ಖಂಡ ಹೀಗೆ ಉತ್ತರ ಹಾಗೂ ಮಧ್ಯ ಭಾರತದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರವನ್ನು ಸಂಪೂರ್ಣವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆಯಾದರೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಪಕ್ಷಕ್ಕೆ ಕಠಿಣ ಸವಾಲಾಗಿಯೇ ಮುಂದುವರೆದಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿAದ ಅಧಿಕಾರ ಕಸಿದುಕೊಂಡ ಬಿಜೆಪಿಗೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ತನ್ನ ಪಾರುಪತ್ಯ ಬೆಳೆಸುವುದು ಕಠಿಣ ಕೆಲಸವಲ್ಲ. ಆದರೆ ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಈಗಲೂ ಮುಂದುವರೆದಿರುವುದು ಬಿಜೆಪಿ ಪಾಲಿಗೆ ಕಠಿಣ ಕೆಲಸವಾಗಿದೆಯಷ್ಟೇ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ