LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Feature Article

ಆಪರೇಷನ್ ಸಿಂಧೂರ ಬಗ್ಗೆ ಪ್ರಬಂಧ ಬರೆಯಿರಿ : ಗೆಲ್ಲಿರಿ 10 ಸಾವಿರ 

Advertisement
ನವದೆಹಲಿ : ಪಾಕಿಸ್ತಾನ ವಿರುದ್ಧ ಭಾರತ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ದೇಶ ವಿದೇಶಗಳಲ್ಲಿ ಆಪರೇಷನ್ ಸಿಂಧೂರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಇದೀಗ ಜೂನ್ 1 ರಿಂದ 30ರವರೆಗೆ ಆಪರೇಷನ್ ಸಿಂಧೂರ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಘೋಷಿಸಿದೆ.

'X' ನಲ್ಲಿನ ಪೋಸ್ಟ್‌ನಲ್ಲಿ ಸಚಿವಾಲಯವು, ಟಾಪ್ 3 ವಿಜೇತರಿಗೆ ತಲಾ 10,000 ರೂಪಾಯಿ ನಗದು ಬಹುಮಾನ ನೀಡಲಾಗುವುದು ಮತ್ತು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ವಿಶೇಷ ಅವಕಾಶ ಕೊಡಲಾಗುತ್ತದೆ ಎಂದು ತಿಳಿಸಿದೆ.'ರಕ್ಷಣಾ ಸಚಿವಾಲಯವು ತಮ್ಮ ಧ್ವನಿಯನ್ನು ಕೇಳುವಂತೆ ಮಾಡಲು ಯುವ ಮನಸ್ಸುಗಳನ್ನು ಆಹ್ವಾನಿಸುತ್ತದೆ.

ರಕ್ಷಣಾ ಸಚಿವಾಲಯ ಮತ್ತು ಭಾರತ ಸರ್ಕಾರದ ದ್ವಿಭಾಷಾ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ' ಎಂದು ರಕ್ಷಣಾ ಇಲಾಖೆ ಪೋಸ್ಟ್ ಮಾಡಿದೆ.

ಜೂನ್ 1 ರಿಂದ 30ರವರೆಗೆ ಸ್ಪರ್ಧೆ ನಡೆಯಲಿದೆ. ಯಾವುದೇ ವ್ಯಕ್ತಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಬಂಧ ಬರೆಯಬಹುದು.

ಸ್ಪರ್ಧೆಯ ವಿವರಗಳು ಮತ್ತು ಆಪರೇಷನ್ ಸಿಂಧೂರದ ಲೋಗೋ ಹೊಂದಿರುವ ಪೋಸ್ಟರ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾಗಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲಗಳನ್ನು ಗುರಿಯಾಗಿಸಿ ಮೇ 7ರಂದು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು. ಭಯೋತ್ಪಾದನೆಯ ವಿರುದ್ಧ ಭಾರತ ಸಮರ ಸಾರಿದೆ ಎಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೇಳಿದೆ.

ಭಯೋತ್ಪಾದನೆಗೆ, ವಿಶೇಷವಾಗಿ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದಕ್ಕೆ ಆಪರೇಷನ್ ಸಿಂಧೂರ ಉದಾಹರಣೆಯಾಗಿದೆ ಎಂದು ಮೋದಿ ಹೇಳಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST